ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ | ಕೋಲ್ಕತ್ತಾದಲ್ಲಿ ಬಿಜೆಪಿ ಬೃಹತ್ ಸಮಾವೇಶ
Автор: DD Chandana News
Загружено: 2026-03-14
Просмотров: 23
Описание:
ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೋಲ್ಕತ್ತಾದಲ್ಲಿ ಭಾರತೀಯ ಜನತಾ ಪಕ್ಷದ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡರು.
ಈ ವೇಳೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಪಕ್ಷದ ನಾಯಕ ಹಾಗೂ ಚಿತ್ರನಟ ಮಿಥುನ್ ಚಕ್ರವರ್ತಿ ಸೇರಿದಂತೆ ಪಕ್ಷದ ಹಲವು ನಾಯಕರು ಉಪಸ್ಥಿತರಿದ್ದರು.
ಬಳಿಕ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಅಧಿಕಾರಾವಧಿಯಲ್ಲಿ ದುರಾಡಳಿತ ಮತ್ತು ಭ್ರಷ್ಟಾಚಾರ ಹೆಚ್ಚಾಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನ ಪಾಠ ಕಲಿಸಲಿದ್ದಾರೆ ಎಂದರು.
ರಾಜ್ಯದಲ್ಲಿ ಮೂಲಸೌಕರ್ಯ ಒದಗಿಸುವಲ್ಲಿ ಟಿಎಂಸಿ ಸರ್ಕಾರ ವಿಫಲವಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹಿಂದೆ ಬಿದ್ದಿದೆ. ಅಪರಾಧ ಹಿನ್ನೆಲೆ ಇರುವವರಿಗೆ ರಕ್ಷಣೆ ನೀಡುತ್ತಿದೆ. ಟಿಎಂಸಿ ಸರ್ಕಾರ ಅಧಿಕಾರದಿಂದ ಕೆಳಗಿಳಿದರೆ, ರಾಜ್ಯದ ಜನರಿಗೆ ಸೂರು ದೊರೆಯಲಿದೆ. ಇದು ಮೋದಿ ಗ್ಯಾರಂಟಿ ಎಂದು ಹೇಳಿದರು.
ಪಶ್ಚಿಮ ಬಂಗಾಳದ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಸ್ವಾಗತಿಸುವ ವೇಳೆ ಶಿಷ್ಟಾಚಾರವನ್ನು ಇಲ್ಲಿನ ರಾಜ್ಯ ಸರ್ಕಾರ ಪಾಲಿಸಿಲ್ಲ. ಈ ಮೂಲಕ ದೇಶದ ಸಂವಿಧಾನ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದೆ ಎಂದರು.
ಪಶ್ಚಿಮ ಬಂಗಾಳದಲ್ಲಿ ನುಸುಳುಕೋರರು ನಿಯಂತ್ರಣ ಸಾಧಿಸುತ್ತಿದ್ದಾರೆ. ಇದರಿಂದಾಗಿ ಕಳೆದ ದಶಕದಲ್ಲಿ ಬಂಗಾಳದಲ್ಲಿ ಹೆಚ್ಚಿನ ಪ್ರದೇಶಗಳ ಜನಸಂಖ್ಯಾ ಶಾಸ್ತ್ರವೇ ಬದಲಾಗಿದೆ. ಬಂಗಾಳದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ. ನಿರಾಶ್ರಿತ ಹಿಂದೂಗಳಿಗೆ ಪೌರತ್ವ ನೀಡುವ ವಿಷಯದಲ್ಲಿ ಟಿಎಂಸಿ ಸರ್ಕಾರ ವಿರೋಧಿಸುತ್ತಿದೆ. ನುಸುಳುಕೋರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಮೀನಾಮೇಷ ಎಣಿಸುತ್ತಿದೆ ಎಂದು ಹೇಳಿದರು.
#LiveDDChandanaNews #DDChandanaNews #DDChandana #DDKannada
Повторяем попытку...
Доступные форматы для скачивания:
Скачать видео
-
Информация по загрузке: