ವಿಪತ್ತು ನಿರ್ವಹಣೆಗೆ ಸದಾ ಸನ್ನದ್ಧರಾಗಿ;ಜಿಂದಾಲ್ ಕಂಪನಿಯಲ್ಲಿ ರಾಸಾಯನಿಕ ಸೋರಿಕೆ ತಾಲೀಮು
Автор: DD Chandana News
Загружено: 2026-03-11
Просмотров: 32
Описание:
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ದಾಬಸ್ಪೇಟೆಯ ಜಿಂದಾಲ್ ಅಲ್ಯೂಮಿನಿಯಂ ಕಾರ್ಖಾನೆಯಲ್ಲಿ ನಿನ್ನೆ ಹಮ್ಮಿಕೊಳ್ಳಲಾಗಿದ್ದ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಕಾರ್ಯಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಚಾಲನೆ ನೀಡಿದರು.
ಈ ವೇಳೆ ಕಾರ್ಖಾನೆಗಳ ಜಂಟಿ ನಿರ್ದೇಶಕ ಪಾರ್ಥಸಾರಥಿ, ಉಪನಿರ್ದೇಶಕ ನರಸಿಂಹಮೂರ್ತಿ, ಜಿಂದಾಲ್ ಅಲ್ಯೂಮಿನಿಯಂ ಕಾರ್ಖಾನೆ ಮುಖ್ಯಸ್ಥರಾದ ವಿಕ್ರಮ್ ಶರ್ಮಾ, ವ್ಯವಸ್ಥಾಪಕ ನಿರ್ದೇಶಕ ಸತೀಶ್, ಜಿಂದಾಲ್ ಕಂಪನಿಯ ಸುರಕ್ಷತಾ ಮತ್ತು ಪರಿಸರ ವಿಭಾಗದ ಮುಖ್ಯಸ್ಥ ರವಿಕುಮಾರ್ ಸೇರಿದಂತೆ ಜಿಂದಾಲ್ ಕಂಪನಿಯ ಪ್ರಮುಖರು ಉಪಸ್ಥಿತರಿದ್ದರು.
ಪೈಪ್ಲೈನ್ ಹಾನಿಯಿಂದ ಅನಿಲ ಸೋರಿಕೆ ಹಾಗೂ ಬೆಂಕಿ ಅವಘಡ ಸಂಭವಿಸಿದರೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಅಣುಕು ಪ್ರದರ್ಶನ ನೀಡಲಾಯಿತು.
ಎನ್.ಡಿ.ಆರ್.ಎಫ್, ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಸುಮಾರು 500ಕ್ಕೂ ಹೆಚ್ಚು ಕಾರ್ಮಿಕರನ್ನು ರಕ್ಷಿಸುವ ತಾಲೀಮು ನಡೆಸಲಾಯಿತು. (WATCH)
ಬಳಿಕ ಸೈಯಿದಾ ಆಯಿಷಾ, ಆಕಸ್ಮಿಕವಾಗಿ ಸಂಭವಿಸುವ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ಸಮನ್ವಯ ಇಲಾಖೆಗಳು ಸದಾ ಸನ್ನದ್ಧವಾಗಿರಬೇಕು. ಭೂಪಾಲ್ ಅನಿಲ ದುರಂತದಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ಇಂತಹ ಪ್ರದರ್ಶನಗಳು ಸಹಕಾರಿ ಎಂದು ಅಭಿಪ್ರಾಯಪಟ್ಟರು.
ದೂರದರ್ಶನದೊಂದಿಗೆ ರವಿಕುಮಾರ್, ಜಿಲ್ಲಾಡಳಿತದ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಮೂಲಕ ಕಾರ್ಖಾನೆಗಳಲ್ಲಿ ರಾಸಾಯನಿಕ ಸೋರಿಕೆಯಂತಹ ದುರ್ಘಟನೆಗಳು ಸಂಭವಿಸಿದಾಗ ಕಾರ್ಮಿಕರು ಹಾಗೂ ಸಾರ್ವಜನಿಕರು ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಸತೀಶ್, ರಾಸಾಯನಿಕ ಸೋರಿಕೆಯಂತಹ ದುರ್ಘಟನೆಗಳು ಸಂಭವಿಸಿದರೆ ಸಾರ್ವಜನಿಕರು ಹಾಗೂ ಕಾರ್ಮಿಕರು ಆತಂಕಪಡುವ ಅಗತ್ಯವಿಲ್ಲ ಎಂದು ದೈರ್ಯ ತುಂಬಿದರು.
ಅವಿನಾಶ್, ಪ್ರತೀ ಮೂರು ತಿಂಗಳಿಗೊಮ್ಮೆ ಜಿಲ್ಲೆಯಲ್ಲಿ ಈ ರೀತಿಯ ಅಣುಕು ಪ್ರದರ್ಶನಗಳನ್ನು ಏರ್ಪಡಿಸುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಹೆಚ್ಚಾಗಲಿದೆ ಎಂದು ಅಭಿಪ್ರಾಯಪಟ್ಟರು.
Повторяем попытку...
Доступные форматы для скачивания:
Скачать видео
-
Информация по загрузке: