ಪಶು ಸಂಗೋಪನೆ ವಲಯಕ್ಕೆ ಉತ್ತೇಜನ | ಹೈನುಗಾರರ ಆರ್ಥಿಕ ಸಬಲೀಕರಣಕ್ಕೆ ಕ್ರಮ
Автор: DD Chandana News
Загружено: 2026-02-04
Просмотров: 117
Описание:
ರಾಜ್ಯಸಭೆಯಲ್ಲಿಂದು ಮೊದಲಿಗೆ ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಳ್ಳಲಾಯಿತು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪಶು ಸಂಗೋಪನೆ ಸಚಿವ ರಾಜೀವ್ ರಂಜನ್ ಸಿಂಗ್ , ಕೇಂದ್ರ ಸರ್ಕಾರ , ಪಶುಸಂಗೋಪನೆ ವಲಯಕ್ಕೆ ಉತ್ತೇಜನ ನೀಡುತ್ತಿದ್ದು, ಹಾಲು ಉತ್ಪಾದನೆಯಿಂದ ರೈತರ ಆರ್ಥಿಕ ಬಲ ಹೆಚ್ಚುವಂತೆ ಮಾಡಲು , ಕ್ರಮಕೈಗೊಂಡಿದೆ ಎಂದು ತಿಳಿಸಿದರು.
ಪ್ರಸ್ತುತ ಹಾಲು ಉತ್ಪಾದನೆಯಲ್ಲಿ ಭಾರತ , ಪ್ರಪಂಚದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಆದರೆ ಈ ವಲಯ ಬಹುತೇಕ ಅಸಂಘಟಿತ ಕ್ಷೇತ್ರವಾಗಿದೆ. ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಸಂಘಟಿತ ವಲಯಕ್ಕೆ ತರಲು ಪ್ರಯತ್ನ ನಡೆಸಲಾಗುತ್ತಿದೆ. ಪಶು ಸಂಗೋಪನೆಯಲ್ಲಿ ತೊಡಗಿರುವ ರೈತಾಪಿ ವರ್ಗಕ್ಕೆ, ಹೆಚ್ಚಿನ ಲಾಭ ದೊರೆಯುವಂತೆ ಮಾಡುವ ಪ್ರಯತ್ನಗಳು ಮುಂದುವರಿದಿವೆ ಎಂದು ಹೇಳಿದರು.
ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್, ದೇಶದಲ್ಲಿ ನಕ್ಸಲ್ ಚಟುವಟಿಕೆಯನ್ನು ನಿರ್ಮೂಲನೆ ಮಾಡಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ನೀತಿ ರೂಪಿಸಿದ್ದು, 6 ಕಾರ್ಯಕ್ರಮಗಳ ಮೂಲಕ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. 2026ರ ಮಾರ್ಚ್ ಅಂತ್ಯದೊಳಗೆ , ನಕ್ಸಲ್ ಚಟುವಟಿಕೆಯನ್ನು ನಿರ್ಮೂಲನೆ ಮಾಡುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು , ದೇಶದ ಜನತೆಗೆ ಭರವಸೆ ನೀಡಿದ್ದಾರೆ. ಅದನ್ನು ಪೂರೈಸುವ ನಿಟ್ಟಿನಲ್ಲಿ ಮುನ್ನಡೆಯುತ್ತಿದ್ದೇವೆ ಎಂದು ಹೇಳಿದರು.
2014ಕ್ಕೂ ಮೊದಲು ನಕ್ಸಲ್ ಚಟುವಟಿಕೆಯ ನಿಯಂತ್ರಣಕ್ಕೆ ಸೂಕ್ತ ನೀತಿ ಇರಲಿಲ್ಲ. ಪರಿಣಾಮವಾಗಿ ಪಶುಪತಿಯಿಂದ ತಿರುಪತಿಯವರೆಗೆ ಕೆಂಪು ಕಾರಿಡಾರ್ ನಿರ್ಮಾಣವಾಗಿ , ದೇಶದ ಆಂತರಿಕ ಸುರಕ್ಷತೆಗೆ ಧಕ್ಕೆ ಎದುರಾಗಿತ್ತು. ಎಡಪಂಥೀಯ ಚಟುವಟಿಕೆಯ ಕುರಿತು ಕೇಂದ್ರ ಸರ್ಕಾರ ಶೂನ್ಯ ಸಹಿಷ್ಣುತೆ ಹೊಂದಿದೆ. ನಕ್ಸಲ್ ಬಾಧಿತ 500ಕ್ಕೂ ಅಧಿಕ ಸ್ಥಳಗಳಲ್ಲಿ , ಕೇಂದ್ರ ಮೀಸಲು ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ರಸ್ತೆಗಳ ನಿರ್ಮಾಣ ಸೇರಿದಂತೆ , ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗಿದ್ದು, 10 ಸಾವಿರಕ್ಕೂ ಅಧಿಕ ಮೊಬೈಲ್ ಟವರ್ ಗಳನ್ನು ಸ್ಥಾಪಿಸಲಾಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳು, ಕೌಶಲ ವಿಕಾಸ ಕೇಂದ್ರಗಳು, ಕೇಂದ್ರೀಯ ವಿದ್ಯಾಲಯಗಳು ಮತ್ತು ನವೋದಯ ವಿದ್ಯಾಲಯಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು.
2014ರಲ್ಲಿ ದೇಶದ 10 ರಾಜ್ಯಗಳು , ನಕ್ಸಲ್ ಚಟುವಟಿಕೆಯ ಪ್ರಭಾವಕ್ಕೆ ತುತ್ತಾಗಿದ್ದವು, ಈ ಸಂಖ್ಯೆ ಈಗ ಶೇಕಡ 70 ರಷ್ಟು ಇಳಿಕೆಯಾಗಿ ಕೇವಲ ಮೂರು ರಾಜ್ಯಗಳಲ್ಲಿ ನಕ್ಸಲ್ ಪ್ರಭಾವವಿದೆ. ಹಿಂಸಾತ್ಮಕ ಘಟನೆಗಳಲ್ಲೂ ಗಣನೀಯ ಇಳಿಕೆಯಾಗಿದೆ ಎಂದು ತಿಳಿಸಿದರು.
ರಾಷ್ಟ್ರಪತಿಗಳ ಭಾಷಣದ ಕುರಿತ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡ ರಾಜ್ಯಸಭೆ ನಾಯಕ ಜೆ.ಪಿ. ನಡ್ಡಾ , ರಾಷ್ಟ್ರಪತಿ ಅವರ ಭಾಷಣದಲ್ಲಿ ಭಾರತದ ಅದ್ಭುತ ವಿಕಾಸ ಯಾತ್ರೆ ವ್ಯಕ್ತವಾಗಿದೆ. ವಿಕಸಿತ ಭಾರತದ ದೃಷ್ಟಿಕೋನವನ್ನು ಅವರು ದೇಶದ ಮುಂದಿಟ್ಟಿದ್ದಾರೆ. ದೇಶದ ಸಂಸ್ಕೃತಿ , ಪರಂಪರೆಗಳನ್ನು ಬಿಂಬಿಸುವ ಜೊತೆಗೆ ಅಭಿವೃದ್ಧಿ ಮಾರ್ಗಸೂಚಿಯನ್ನು ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಪರಿವರ್ತನೆಯ ಹಾದಿಯಲ್ಲಿ ಮುನ್ನಡೆಯುತ್ತಿದೆ. ಆರ್ಥಿಕತೆ ಅತಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ನಾವೀಗ ಸುಧಾರಣಾ ಮಾರ್ಗದಲ್ಲಿ ಸಾಗುತ್ತಿದ್ದೇವೆ. ವಿಕಸಿತ ಭಾರತ ಜಿ ರಾಮ್ ಜೀ ಕಾಯ್ದೆ , ಇದಕ್ಕೆ ಉತ್ತಮ ಉದಾಹರಣೆಯಾಗಿದೆ ಎಂದರು.
ವಿರೋಧಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಕಸಿತ ಭಾರತವನ್ನು ಧ್ವೇಷ ಹಾಗೂ ತಾರತಮ್ಯದ ಮೂಲಕ ನಿರ್ಮಿಸಲು ಸಾಧ್ಯವಿಲ್ಲ ಎಂದು ಹೇಳಿದರು.
#LiveDDChandanaNews #DDChandanaNews #DDChandana #DDKannada
Повторяем попытку...
Доступные форматы для скачивания:
Скачать видео
-
Информация по загрузке: