ಭಾರತೀಯ ಕ್ರಿಕೆಟ್ ತಂಡಕ್ಕೆ ಗಣ್ಯರ ಶುಭಾಶಯ ; ರಾಷ್ಟ್ರಪತಿ, ಪ್ರಧಾನಿ ಅವರಿಂದ ಅಭಿನಂದನೆ
Автор: DD Chandana News
Загружено: 2026-03-08
Просмотров: 116
Описание:
ಐಸಿಸಿ ವಿಶ್ವಕಪ್ ಟಿ-20 ಕ್ರಿಕೆಟ್ ಪ್ರಶಸ್ತಿ ಜಯಿಸಿ ಐತಿಹಾಸಿಕ ಸಾಧನೆ ಮಾಡಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅನೇಕ ಗಣ್ಯರು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ವಿಶ್ವಕಪ್ ಕ್ರಿಕೆಟ್ ಗೆಲ್ಲುವ ಮೂಲಕ ಇತಿಹಾಸದ ಹಲವಾರು ಶಿಖರಗಳನ್ನು ಏರಿದ ಟೀಂ ಇಂಡಿಯಾಗೆ ಹೃತ್ಪೂರ್ವಕ ಅಭಿನಂದನೆಗಳು. ಮೂರು ಬಾರಿ ವಿಶ್ವಕಪ್ ಗೆದ್ದ ಏಕೈಕ ದೇಶ ಎಂಬ ಹೆಮ್ಮೆ ಭಾರತಕ್ಕಿದೆ. ಇದು ಕ್ರಿಕೆಟ್ ಪ್ರಿಯರಿಗೆ ಅಪಾರ ಸಂತೋಷ ಮತ್ತು ಹೆಮ್ಮೆ ತರುತ್ತದೆ. ಈ ಸಾಮೂಹಿಕ ಗೆಲುವಿಗೆ ಪ್ರತಿಯೊಬ್ಬ ಆಟಗಾರ ಸಂಪೂರ್ಣ ನಿರ್ವಹಣೆ ಮತ್ತು ಸಹಾಯಕ ಸಿಬ್ಬಂದಿ ಅತ್ಯುನ್ನತ ಪ್ರಶಂಸೆಗೆ ಅರ್ಹರಾಗಿದ್ದಾರೆ. ನಮ್ಮ ಕ್ರಿಕೆಟ್ ತಂಡವು ಭವಿಷ್ಯದಲ್ಲಿ ನಿರಂತರ ವೈಭವ ಪಡೆಯಲಿ ಎಂದು ನಾನು ಬಯಸುವುದಾಗಿ ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. WATCH
**
ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಟಿ-20 ವಿಶ್ವಕಪ್ ಅನ್ನು ಮತ್ತೊಮ್ಮೆ ಗೆದ್ದು ಪ್ರಶಸ್ತಿ ಗಳಿಸಿಕೊಂಡಿರುವ ಟೀಂ ಇಂಡಿಯಾಗೆ ಅಭಿನಂದನೆಗಳು. ಫೈನಲ್ ನಲ್ಲಿ ಇತಿಹಾಸ ನಿರ್ಮಿಸುವ ಮತ್ತು ಅಮೋಘ ಪ್ರದರ್ಶನದೊಂದಿಗೆ ಭಾರತ ಸತತ ಮೂರು ಐಸಿಸಿ ಪುರುಷರ ಟಿ-20 ವಿಶ್ವಕಪ್ ಪ್ರಶಸ್ತಿಗಳನ್ನು ಗೆದ್ದ ಮೊದಲ ತಂಡವಾಗಿದೆ. ಇದು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣವಾಗಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. WATCH
**
ಪ್ರಧಾನಿ ನರೇಂದ್ರ ಮೋದಿ, ಟಿ-20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ಈ ಗಮನಾರ್ಹ ಗೆಲುವು, ಅಸಾಧಾರಣ ಕೌಶಲ್ಯ, ದೃಢ ನಿಶ್ಚಯ ಮತ್ತು ತಂಡ ಕಾರ್ಯವನ್ನು ಪ್ರತಿಬಿಂಬಿಸುತ್ತದೆ. ಪಂದ್ಯಾವಳಿಯುದ್ದಕ್ಕೂ ಭಾರತೀಯ ಆಟಗಾರರು ಅತ್ಯುತ್ತಮ ಧೈರ್ಯವನ್ನು ತೋರಿದ್ದಾರೆ. ಈ ಗೆಲುವು ಪ್ರತಿಯೊಬ್ಬ ಭಾರತೀಯನ ಹೃದಯವನ್ನು ಹೆಮ್ಮೆ ಮತ್ತು ಸಂತೋಷದಿಂದ ತುಂಬಿದೆ. ಅಭಿನಂದನೆಗಳು ಟೀಂ ಇಂಡಿಯಾ ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. WATCH
**
ಸ್ವತಃ ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು, ಪಂದ್ಯ ವೀಕ್ಷಿಸಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತ ತಂಡದ ಐತಿಹಾಸಿಕ ಗೆಲುವಿಗೆ ಹ್ಯಾಡ್ಸ್ ಆಫ್ ಹೇಳಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಅವರು ಭಾರತ ತಂಡದ ಅಸಾಧಾರಣ ಪ್ರದರ್ಶನ ಮತ್ತು ಹುರುಪಿನ ಶೌರ್ಯವು ರಾಷ್ಟ್ರಕ್ಕೆ ಕೀರ್ತಿ ಮತ್ತು ಹೆಮ್ಮೆಯನ್ನು ತಂದಿದೆ. ಪ್ರತಿಯೊಬ್ಬ ಭಾರತೀಯನನ್ನು ಹೆಮ್ಮೆ ಪಡುವಂತೆ ಮಾಡಿದ್ದಕ್ಕಾಗಿ ಇಡೀ ತಂಡಕ್ಕೆ ಅಭಿನಂದನೆಗಳು ಎಂದು ಹೇಳಿದ್ದಾರೆ. WATCH
**
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿಶ್ವಕಪ್ ಪ್ರಶಸ್ತಿಯನ್ನು ಉಳಿಸಿಕೊಂಡ ಭಾರತ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ವಿಶ್ವ ಕ್ರಿಕೆಟ್ ಇತಿಹಾಸದಲ್ಲಿ ಇದು ಮತ್ತೊಂದು ಮೈಲಿಗಲ್ಲು. ಮೊದಲ ಬಾರಿಗೆ ಟೀಂ ಇಂಡಿಯಾ ತವರು ನೆಲದಲ್ಲಿ ಟಿ-20 ವಿಶ್ವಕಪ್ ಅನ್ನು ಎತ್ತಿ ಹಿಡಿದಿದ್ದು, ಇಡೀ ದೇಶಕ್ಕೆ ಹೆಮ್ಮೆಯನ್ನು ತಂದುಕೊಟ್ಟಿದೆ. ಈ ಐತಿಹಾಸಿಕ ಕ್ಷಣವು ಅತ್ಯಂತ ವಿಶೇಷವಾಗಿದೆ ಎಂದು ಹೇಳಿದ್ದಾರೆ. WATCH
**
ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಶ್ವವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಪಂದ್ಯಾವಳಿಯ ಮೊದಲ ದಿನದಿಂದಲೇ ಚಾಂಪಿಯನ್ ಆಟವಾಡುತ್ತ ಬಂದಿದ್ದ ನಮ್ಮ ತಂಡ ಪ್ರಶಸ್ತಿಗೆ ಅತ್ಯಂತ ಅರ್ಹವಾಗಿತ್ತು. ಯುವ ಆಟಗಾರರಿಂದಲೇ ತುಂಬಿದ್ದ ಈ ತಂಡ ಅನುಭವನದಲ್ಲಿ ಕಡಿಮೆ ಇದ್ದರೂ ಪ್ರತಿಭಾಶಾಲಿಗಳಿಂದ ಕೂಡಿತ್ತು. ತವರು ಪ್ರೇಕ್ಷಕರ ಬೆಂಬಲ, ಆಟಗಾರರ ಶ್ರಮ ಮತ್ತು ಕೋಟ್ಯಾಂತರ ಭಾರತೀಯರ ಹಾರೈಕೆ ವಿಶ್ವಕಪ್ ಕಿರೀಟವಾಗಿ ನಮ್ಮವರ ಮುಡಿ ಸೇರಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. WATCH
****
#LiveDDChandanaNews #DDChandanaNews #DDChandana #DDKannada
Повторяем попытку...
Доступные форматы для скачивания:
Скачать видео
-
Информация по загрузке: