ಸ್ವಸ್ಥ ಭಾರತ-ಶ್ರೇಷ್ಠ ಭಾರತ ಯುವ ಶುದ್ಧಿ ಅಭಿಯಾನ ; ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ
Автор: DD Chandana News
Загружено: 2026-02-27
Просмотров: 39
Описание:
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ವಿವಿಧ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ವಿಜಯಪುರ ನಗರದಲ್ಲಿಂದು, “ಸ್ವಸ್ಥ ಭಾರತ - ಶ್ರೇಷ್ಠ ಭಾರತ' ಯುವ ಶುದ್ಧಿ ಅಭಿಯಾನ” ಹಮ್ಮಿಕೊಳ್ಳಲಾಯಿತು.
ಇದೇ ವೇಳೆ ಅಭಿಯಾನದಲ್ಲಿ ನಶಾ ಮುಕ್ತ ಭಾರತ, ನಶಾ ಮುಕ್ತ ಕರ್ನಾಟಕ ಹಾಗೂ ಅಂಗಾಂಗ ದಾನದ ಕುರಿತ ಜಾಗೃತಿ ಜಾಥಾ ನಡೆಯಿತು.
ಅಭಿಯಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಚಾಲನೆ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಸಂಪತ್ ಕುಮಾರ ಗುಣಾರಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಭಗವಾನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೋಳಿ, ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದ ಸನೆಟ್ ಸದಸ್ಯ ಡಾ.ಸಂತೋಷ ಇಂಡಿ ಮತ್ತಿತರರಿದ್ದರು.
ಬಳಿಕ ದೂರದರ್ಶನದೊಂದಿಗೆ ಡಾ.ಭಗವಾನ್, ವಿಜಯಪುರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಈ ಜಾಥಾ ಹಮ್ಮಿಕೊಂಡಿದ್ದು, ನಶಾ ಮುಕ್ತ ಹಾಗೂ ಅಂಗಾಂಗ ದಾನದ ಕುರಿತು ಜಾಥಾ ಹಮ್ಮಿಕೊಳ್ಳಲಾಗಿದೆ. ಆ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.
ಡಾ.ಶಿವಾನಂದ ಮಾಸ್ತಿಹೋಳಿ, ಓರ್ವ ವ್ಯಕ್ತಿ ಮರಣದ ಬಳಿಕವೂ 8 ಜನರಿಗೆ ಜೀವದಾನ ಮಾಡಬಹುದಾಗಿದ್ದು, ಅಂಗಾಗ ದಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ಡಾ.ಸಂತೋಷ ಕುಮಾರ್ ಇಂಡಿ, ವಿಜಯಪುರದಲ್ಲಿ 29 ಕಾಲೇಜು ಒಳಗೊಂಡಂತೆ 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯಿಂದ ಅಂಗಾಂಗ ದಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
#LiveDDChandanaNews #DDChandanaNews #DDChandana #DDKannada
Повторяем попытку...
Доступные форматы для скачивания:
Скачать видео
-
Информация по загрузке: