ಕೇಂದ್ರದ ಹಲವು ಯೋಜನೆಗಳಿಗೆ ರಾಷ್ಟ್ರಪತಿ ಚಾಲನೆ | ಲಕ್ಷಾಧಿಪತಿ ಮಹಿಳೆ, ಸಹೇಲಿ ಪಿಂಕ್ ಸ್ಮಾರ್ಟ್ ಕಾರ್ಡ್
Автор: DD Chandana News
Загружено: 2026-03-02
Просмотров: 38
Описание:
ರಾಷ್ಟ್ರಪತಿ ದ್ರೌಪದಿ ಮುರ್ಮು ದೆಹಲಿಯಲ್ಲಿಂದು ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪಾಲ್ಗೊಂಡು ಲಕ್ಷಾಧಿಪತಿ ಮಹಿಳೆ, ಸಹೇಲಿ ಪಿಂಕ್ ಸ್ಮಾರ್ಟ್ ಕಾರ್ಡ್, ನನ್ನ ಬಂಡವಾಳ ನನ್ನ ಅಧಿಕಾರ ಹಾಗೂ ಉಚಿತ ಎಲ್ ಪಿಜಿ ಸಿಲಿಂಡರ್ ವಿತರಣಾ ಯೋಜನೆಗೆ ಚಾಲನೆ ನೀಡಿದರು.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ, ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮ ಉದ್ದೇಶಿಸಿ ರಾಷ್ಟ್ರಪತಿ, ಮಹಿಳೆಯರು ಸಮಾಜದ ಪ್ರಮುಖ ಸ್ತಂಭವಾಗಿದ್ದು, ಮಹಿಳಾ ಸಶಸ್ತೀಕರಣ ನಾಗರಿಕ ಸಮಾಜದ ನಿಜವಾದ ಅಸ್ಮಿತೆಯಾಗಿದೆ. ಮಹಿಳೆಯರು ಸಶಕ್ತಗೊಂಡಾಗ ದೇಶ ಅಭಿವೃದ್ಧಿಯಾಗುತ್ತದೆ ಎಂದರು.
ಕೇಂದ್ರ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಹಲವಾರು ಪರಿವರ್ತನೀಯ ಯೋಜನೆಗಳನ್ನು ಜಾರಿಗೊಳಿಸಿದೆ. ಪಿಎಂ ಉಜ್ವಲ ಯೋಜನೆ, ಬೇಟಿ ಬಚಾವೊ - ಬೇಟಿ ಪಡಾವೊ ಮತ್ತು ಪ್ರಧಾನಮಂತ್ರಿ ಮಾತೃವಂದನಾ ಮುಂತಾದ ಯೋಜನೆಗಳ ಮೂಲಕ ಮಹಿಳೆಯರ ಹಿತಾಸಕ್ತಿ ಕಾಪಾಡಲು ಕೆಲಸ ಮಾಡುತ್ತಿದೆ. ಮಹಿಳೆಯರ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ ಬರೆದಿದೆ ಎಂದು ಹೇಳಿದರು.
#LiveDDChandanaNews #DDChandanaNews #DDChandana #DDKannada
Повторяем попытку...
Доступные форматы для скачивания:
Скачать видео
-
Информация по загрузке: