ಒಳಮಿಸಲಾತಿ ಗೊಂದಲ ಕೂಡಲೇ ಸರಿಪಡಿಸಬೇಕು ; ಶೇಕಡ 56ರ ಮೀಸಲಾತಿಯೊಂದಿಗೆ ನೇಮಕಾತಿಗೆ ಆಗ್ರಹ
Автор: DD Chandana News
Загружено: 2026-03-13
Просмотров: 464
Описание:
ರಾಜ್ಯ ಸರ್ಕಾರ ಶೇಕಡ 56 ರ ಮೀಸಲಾತಿಯೊಂದಿಗೆ ಉದ್ಯೋಗ ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಒಳಮಿಸಲಾತಿ ಗೊಂದಲವನ್ನು ಕೂಡಲೇ ಸರಿಪಡಿಸಬೇಕೆಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿಂದು ಅವರು, ಪರಿಶಿಷ್ಟ ಸಮುದಾಯದ ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ತಾನೇ ರೂಪಿಸಿದ ಕಾನೂನು ಜಾರಿಗೆ ವಿಳಂಬ ದೋರಣೆ ಅನುಸರಿಸುತ್ತಿದೆ. ಸರ್ಕಾರದಲ್ಲೇ ಒಳ ಮಿಸಲಾತಿ ವಿರೋಧಿಸುವ ಒಂದು ಗುಂಪಿನ ಒತ್ತಡಕ್ಕೆ ಮುಖ್ಯಮಂತ್ರಿ ಮಣಿದಿದ್ದಾರೆ ಎಂದರು.
ಉದ್ಯೋಗ ಭರ್ತಿಗೆ ಆದೇಶ ಹೊರಡಿಸಲಾಗಿದೆ, ಆದರೆ ಸರ್ಕಾರಕ್ಕೆ ಇದುವರೆಗೆ ಮೀಸಲಾತಿ ಬಗ್ಗೆ ಸ್ಪಷ್ಟನೆ ಇಲ್ಲ. ಉಚ್ಚ ನ್ಯಾಯಾಲಯದ ಮಾರ್ಗದರ್ಶಿ ಸೂಚನೆ ಹಾಗೂ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಶಿಫಾರಸ್ಸನ್ನು ಪರಿಗಣಿಸಿ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ ಶ್ರೀರಾಮುಲು, ಶಾಸಕ ಪ್ರಭು ಚೌಹಾಣ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್ ಮಹೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
#LiveDDChandanaNews #DDChandanaNews #DDChandana #DDKannada
Повторяем попытку...
Доступные форматы для скачивания:
Скачать видео
-
Информация по загрузке: